ವಿಜಯಪುರ: ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಗೋವುಗಳ ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ತಾಜಪುರ ಬಳಿ ನಡೆದಿದೆ. ತಿಕೋಟಾ ಪಿಎಸ್ಐ ಉಳ್ಳಾಗಡ್ಡಿ ನೇತೃತ್ವದ ತಂಡದಿಂದ 16 ಗೋವುಗಳ ರಕ್ಷಣೆ ಮಾಡಲಾಗಿದೆ. ಅಲ್ಲದೇ ಇಬ್ಬರು ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ, ಗೋವುಗಳಿ ಸೇರಿದಂತೆ ವಾಹನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಿಕೋಟಾ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/11/IMG_20231129_190539-671x1024.jpg)