ವಿಜಯಪುರ: ರಸ್ತೆ ದಾಟುವಾಗ ಸ್ವಿಫ್ಟ್ ಕಾರು ಡಿಕ್ಕಿಯಾಗಿರುವ ಪರಿಣಾಮ 18 ಕುರಿಗಳು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಕ್ರಾಸ್ ಬಳಿ ನಡೆದಿದೆ. ರಸ್ತೆ ದಾಟುವ ವೇಳೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಇನ್ನು ಮುತ್ತಗಿ ಗ್ರಾಮದ ನಿವಾಸಿ ಆನಂದ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ, ಕಾರು ಚಾಲಕ ಕಾರು ಸಮೇತ ಪರಾರಿಯಾಗಿದ್ದಾನೆ. ಕೂಡಗಿ ಎನ್ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.