ಧಾರವಾಡ: ಲಾರಿಗೆ ಕಾರಿಗೆ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲಿಯೇ ಐವರು ಅಸುನೀಗಿರುವ ಘಟನೆ ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ನಡೆದಿದೆ. ಇನ್ನೂ ಅಪಘಾತದಲ್ಲಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು
ಮಾಡಲಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಅಲ್ಲದೇ, ಪಾದಚಾರಿಗೂ ಕಾರು ಗುದ್ದಿದ್ದು, ಪಾದಚಾರಿ ಮೃತಪಟ್ಟಿದ್ದಾನೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಧಾರವಾಡದಲ್ಲಿ ಭೀಕರ ಅಪಘಾತ, 5 ಜನರ ಸಾವು
![](https://karnataka1news.com/wp-content/uploads/2023/02/IMG-20230223-WA0003-860x1067.jpg)