ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದ ತನಿಖೆ ನಡೆಸಿದ್ದು, ಆರೋಪಿ ರವಿ ವೆಂಕಟೇಶ ಬಳ್ಳಾರಿ ಎಂಬುವವನನ್ನು ವಶಕ್ಕೆ ಪಡೆದಿದ್ದೇವೆ. ಆ ಬಾಲಕ ಆರೋಪಿಗೆ ಮಾಮಾ, ಮಾಮಾ ಎಂದುಕೊಂಡಿದ್ದ ಅಂತಹ ಬಾಲಕನನ್ನೇ ಆರೋಪಿ ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ರಾಜೀವ.ಎಂ., ಹೇಳಿದರು. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಾಲಕನ ಶವ ಪತ್ತೆಯಾಗಿರುವ ಬೆನ್ನಲ್ಲೇ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಬಾಲಕನ ಮರಣೋತ್ತರ ಪರೀಕ್ಷೆ ಜೊತೆಗೆ ಎಲ್ಲ ರೀತಿಯಲ್ಲಿ ತನಿಖೆ ನಡೆಸಿದ್ದೇವೆ ಎಂದರು.
ಕುಡಿದ ಮತ್ತಿನಲ್ಲಿರುವಾಗಲೇ ಬಾಲಕನ ಕೆನ್ನೆಗೆ ಹೊಡೆದಿದ್ದಾನೆ. ಆಗ ಬಾಲಕ ಪ್ರಜ್ಞೆ ತಪ್ಪಿದ್ದು, ಆಗ ಗಾಬರಿಗೊಂಡ ಆರೋಪಿ ರವಿ ಬಳ್ಳಾರಿ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಅಲ್ಲದೇ ಬೆರಳಚ್ಚು ಸಾಕ್ಷಿ ಪೊಲೀಸರಿಗೆ ಲಭ್ಯವಾಗಬಾರದು ಎಂಬುವಂತ ಹಿನ್ನೆಲೆಯಲ್ಲಿ ಆರೋಪಿ ರವಿ ಬಳ್ಳಾರಿ ಬಾಲಕನ ಬಟ್ಟೆ ಬಿಚ್ಚಲು ಮುಂದಾಗಿದ್ದಾನೆ ಎಂಬುವಂತ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ ಎಂದು ಅವರು ಹೇಳಿದರು. ಇನ್ನೂ ಗೌಂಡಿ ಕೆಲಸ ಮಾಡಿಕೊಂಡಿದ್ದ ರವಿ ಬಳ್ಳಾರಿ ಬಾಲಕನ ಕೊಲೆ ಮಾಡಿರುವುದು ತನಿಖೆಯ ಮೂಲಕ ಮಾಹಿತಿ ಲಭ್ಯವಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ. ಅಲ್ಲದೇ ಎಲ್ಲ ರೀತಿಯ ದಾಖಲೆಗಳು ಹಾಗೂ ಮೆಡಿಕಲ್ ಡಾಕ್ಯುಮೆಂಟ್ ಕೂಡ ಲಭ್ಯವಾಗಿದೆ ಎಂದು ಅವರು ಹೇಳಿದರು.