ವಿಜಯಪುರ: ಮನೆಗಳ್ಳತನ ಮಾಡುತ್ತಿದ್ದ ಓರ್ವನ್ನು ಜಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ನಿಸಾರಮಡ್ಡಿಯ ಲಾಲ ಬಂಗಲಾ ಚರ್ಚ್ ಹತ್ತಿರದ ನಿವಾಸಿ ಮುತ್ತಪ್ಪಾ ಹಣಮಂತ ಮೂಲಿಮನಿ ಬಂಧಿಸಲಾಗಿದೆ.
ರಿಂಗ್ ರೋಡ್ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಆರೋಪಿ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಜಲನಗರ ಠಾಣೆ ವ್ಯಾಪ್ತಿಯ 5 ಪ್ರಕರಣಗಳಲ್ಲಿ ಕಳ್ಳತನ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈತನಿಂದ 150 ಗ್ರಾಂ ಚಿನ್ನಾಭರಣ, 40 ಗ್ರಾಂ ಬೆಳ್ಳಿಯ ಆಭರಣ ಸೇರಿ ಒಟ್ಟು 7.90 ಲಕ್ಷ ರೂ.ಮೌಲ್ಯದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.