ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷಾರ್ಥಿಯ ಪೋಟೋಗೆ ಕಿಡಿಗೇಡಿಗಳು ತಿಥಿ ಪೂಜೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ 1 ರಲ್ಲಿ ನಡೆದಿದೆ.
ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 50 ಬದಿಯಲ್ಲಿ ಪರೀಕ್ಷಾರ್ಥಿ ಸಚಿನ್ ನಾಯಕ ಎಂಬ ವಿದ್ಯಾರ್ಥಿಯ ಪೋಟೋಗೆ ಹೂವಿನ ಹಾರ ಹಾಕಿ, ಟೆಂಗಿನಕಾಯಿ ಒಡೆದು, ಗಡಿಗೆ ಇಟ್ಟು, ಹಾಲ್ ಟಿಕೆಟ್ ಝರಾಕ್ಸ್ ಪ್ರತಿ ಇಟ್ಟು ಕಿಡಿಗೇಡಿಗಳು ವಿಕೃತ ಮೆರೆದಿದ್ದಾರೆ. ಅಲ್ಲದೇ, ಘಟನೆಯಿಂದ ವಿದ್ಯಾರ್ಥಿ ಸಚಿನ್ ನಾಯಕ ಭಯಭೀತರಾಗಿದ್ದಾನೆ. ಇನ್ನು ಪರೀಕ್ಷಾರ್ಥಿಯ ಪೋಷಕರು ಭಯ ವ್ಯಕ್ತಪಡಿಸಿದ್ದಾರೆ. ನಮ್ಮ ಮಗನ ಪೋಟೋ ಇಟ್ಟು ಈ ರೀತಿ ದುಷ್ಕೃತ್ಯವೆಸಗಿದವರ ಪೊಲೀಸರು ಪತ್ತೆ ಮಾಡಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.