ರಾಯಚೂರು: ಬಸ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಅಸುನೀಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ನಾಲೆ ಬಳಿ ನಡೆದಿದೆ.
ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು. ಮೂವರು ಮೃತರು ಆಂಧ್ರದ ನಂದ್ಯಾಲ ಗ್ರಾಮದವರೆಂದು ತಿಳಿದು ಬಂದಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಮೃತ ಕಾರ್ಮಿಕರು.
ಮಸ್ಕಿಯಲ್ಲಿ ಊಟ ಮುಗಿಸಿ ಬೈಕ್ ನಲ್ಲಿ ತೆರಳುವಾಗ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.