ವಿಜಯಪುರ: ಬೈಕ್ಗೆ ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ತಾಂಡಾ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.
38 ವರ್ಷದ ರಾವುತಪ್ಪ ವಿಠಲ್ ಜೀವಣಗಿ ಮೃತಪಟ್ಟಿರುವ ದುರ್ದೈವಿ. ಇನ್ನು ಬೈಕ್ ಗೆ ಹಿಂಬದಿಯಿಂದ ಕಬ್ಬು ತುಂಬಿಕೊಂಡು ಹೋಗುತ್ತಿರುವ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಇದರಿಂದ ರಾವುತಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.