ವಿಜಯಪುರ: ಕಾರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕಾರು ಹೊತ್ತಿ ಉರಿದಿರುವ ಘಟನೆ ವಿಜಯಪುರ ನಗರದ ಇಟ್ಟಂಗಿಹಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಐವರು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ವೇಳೆಯೇ ಅಗ್ನಿ ಅವಗಢ ಸಂಭವಿಸಿ ಜಸ್ಟ್ ಪಾರಾಗಿದ್ದಾರೆ. ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಬಂದು ಅವಗಢದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ರಿಜಿಸ್ಟ್ರೇಷನ್ ಹೊಂದಿರುವ ಆಲ್ಟೋ ಕಾರು ಬೆಂಕಿಗಾಹುತಿ ಆಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.