ವಿಜಯಪುರ: ಬಸ್ ಏರುವಾಗ ವ್ಯಾನಿಟಿ ಬ್ಯಾಗ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ತಮ್ಮ ಕೈಚಳಕ ತೋರಿಸಿ ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೌರಮ್ಮ ಸಂತೋಷ ಕತ್ನಳ್ಳಿ ಚಿನ್ನ ಕಳೆದುಕೊಂಡವರು. ಇನ್ನು ನಗರದ ಬಸ್ ನಿಲ್ದಾಣದಲ್ಲಿ ಬಸ್ ಏರುವಾಗ ಕಳ್ಳರು ವ್ಯಾನಿಟಿ ಬ್ಯಾಗ್ನಲ್ಲಿದ್ದ 2.40 ಲಕ್ಷ ಮೌಲ್ಯದ 80 ಗ್ರಾಂ ಚಿನ್ನ ಕದ್ದು ಎಸ್ಕೇಪ್ ಆಗಿದ್ದಾರೆ. ಈ ಕುರಿತು ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.