ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ಪ್ರಭುಗೌಡ ಬಿರಾದಾರ ಎಂಬುವರ ಮನೆಯಲ್ಲಿ ಬೆಂಕಿ ಅವಘಡ ಆಗಿದ್ದು, ಮನೆಯಲ್ಲಿ ಎಲ್ಲರೂ ಜಾತ್ರೆ ಹೋಗಿದ್ದ ವೇಳೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಮನೆಯಲ್ಲಿನ ಅಪಾರ ಪ್ರಮಾಣದ ವಸ್ತುಗಳು ಹಾಗೂ ಎರಡು ತೊಲಿ ಚಿನ್ನ ಬೆಂಕಿಗಾಹುತಿ ಆವಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಕೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.