ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತ್ಯ ಸಂಸ್ಕಾರ ಮಾಡಲು ನಿರ್ಮಾಣ ಮಾಡಿದ್ದ ಕಟ್ಟೆಯನ್ನು ತೆರವುಗೊಳಿಸಲಾಯಿತು. ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ
ಅಂತ್ಯಸಂಸ್ಕಾರ ಮಾಡಲು ನಿರ್ಮಾಣ ಮಾಡಿದ್ದ ಕಟ್ಟೆ ತೆರವುಗೊಳಿಸಲಾಗಿದೆ. ಯಾವುದೇ ಮಠ, ಮಂದಿರ ತಮ್ಮ ಹೆಸರಲ್ಲಿ ನಿರ್ಮಾಣ ಮಾಡಬಾರದು ಎಂದು ಶ್ರೀಗಳು ಹೇಳಿದ್ದರು. ಅದಕ್ಕಾಗಿ ಶ್ರೀಗಳ ಆಶಯದಂತೆ ಅವರನ್ನು ಅಂತ್ಯ ಸಂಸ್ಕಾರ ಮಾಡಲು ನಿರ್ಮಿಸಿದ್ದ ಕಟ್ಟೆಯೂ ತೆರವುಗೊಳಿಸಲಾಯಿತು. ಅಲ್ಲದೇ, ಆಶ್ರಮ ಹಾಗೂ ಶ್ರೀಗಳನ್ನ ಅಂತ್ಯಸಂಸ್ಕಾರ ಮಾಡಿದ ಸ್ಥಳಕ್ಕೆ ಭಕ್ತರು ಆಗಮಿಸಿ ದರ್ಶನ ಮಾಡುತ್ತಿದ್ದಾರೆ.