ವಿಜಯಪುರ: ಜಿಎನ್ಎಮ್ ನರ್ಸಿಂಗ್ ವಿದ್ಯಾರ್ಥಿಗಳ ಮರುಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಜಿಎನ್ಎಮ್ ನರ್ಸಿಂಗ್ ವಿದ್ಯಾರ್ಥಿಗಳ ಪರೀಕ್ಷೆಯ ಈಗಾಗಲೇ ಮುಕ್ತಾಯಗೊಂಡಿವೆ. ಇದರಲ್ಲಿ ಸುಮಾರು 88 ಸಾವಿರ ವಿದ್ಯಾರ್ಥಿಗಳು ಶ್ರಮಪಟ್ಟು ಓದಿ ಪರೀಕ್ಷೆಯನ್ನು ಎದುರಿಸಿದ್ದಾರೆ. ಆದ್ರೇ, ಬೆಂಗಳೂರಿನ ಬಾಣಸವಾಡಿಯಲ್ಲಿರುವ
ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಾಮೂಹಿಕ ನಕಲು ಮಾಡಿರುವುದು ಬೆಳಕಿಗೆ ಬಂದಿದೆ. ಉಳಿದ ವಿದ್ಯಾರ್ಥಿಗಳು ಪ್ರಾಮಾಣಿಕ ಪ್ರಯತ್ನದಿಂದ ಪರೀಕ್ಷೆಯನ್ನು ಎದುರಿಸಿದ್ದಾರೆ.
ಏಕಾಏಕಿ ಮರುಪರೀಕ್ಷೆ ನಡೆಸಲು ಕೆಎಸ್ಡಿಎನ್ಇ ಬೋರ್ಡ ತೆಗೆದುಕೊಂಡ ನಿರ್ಧಾರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಕೂಡಲೇ ಮರು ಪರೀಕ್ಷೆ ರದ್ದುಗೊಳಿಸಬೇಕು ಎಂದು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮರುಪರೀಕ್ಷೆ ನಡೆಸದಂತೆ ABVP ಪ್ರತಿಭಟನೆ..
![](https://karnataka1news.com/wp-content/uploads/2023/01/IMG_20230119_113904-860x475.jpg)