ಧಾರವಾಡ: ಫರ್ನಿಚರ್ ತಯಾರಿಸುವ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಧಾರವಾಡ ತೇಜಸ್ವಿನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಹೊತ್ತಿ ಉರಿದ ಬೆಂಕಿಯಿಂದ ಬೆಲೆಬಾಳುವ ಕಟ್ಟಿಗೆ ಭಸ್ಮವಾಗಿವೆ. ಮಂಜುನಾಥ ಬಡಿಗೇರ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಕಟ್ಟಿಗೆ ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದರು. ವಿದ್ಯಾಗಿರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.