ಧಾರವಾಡ: ವಿದ್ಯಾಕಾಶಿಯಲ್ಲಿ ಡಬಲ್ ಮರ್ಡರ್ಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಹೌದು..! ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಓರ್ವನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ನಡೆದಿದ್ದು, ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ.
ಮಹಮ್ಮದ್ ಕುಡಚಿ(45), ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಉದ್ಯಮಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಅಲ್ಲದೇ, ಕುಡಚಿ ಮನೆಯಿಂದ ಅನತಿ ದೂರದಲ್ಲೇ ರಕ್ತಸಿಕ್ತವಾಗಿ ಬಿದ್ದಿರುವ ಮತ್ತೊಂದು ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯ ಗುರುತು ತಿಳಿದುಬಂದಿಲ್ಲ. ಮಹ್ಮದ್ ಕುಡುಚಿ ಮೇಲೆ ದಾಳಿಯಾದಾಗ ಈತನ ಮೇಲೆಯೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೇಗನೆ ಆರೋಪಿಗಳ ಪತ್ತೆ ಮಾಡಲಾಗುವುದು. ಈಗಾಗಲೇ ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ. ಬೇಗನೆ ಆರೋಪಿಗಳ ಪತ್ತೆ ಮಾಡುತ್ತೇವೆ ಎಂದು ಕಮಿಷನರ್ ರಮಣ್ ಗುಪ್ತಾ ಹೇಳಿದರು. ಉಪನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಧಾರವಾಡದಲ್ಲಿ ಡಬಲ್ ಮರ್ಡರ್
![](https://karnataka1news.com/wp-content/uploads/2023/05/Knife.jpg)