ಹುಬ್ಬಳ್ಳಿ: ವಂದೇ ಭಾರತ್ ರೈಲು ಜೂನ್ 27ರಿಂದ ಕೆಎಸ್ಆರ್ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಪ್ರತಿ ಮಂಗಳವಾರ ಹೊರತುಪಡಿಸಿ, ವಾರದ ಆರು ದಿನ ಈ ರೈಲು ಸಂಚರಿಸಲಿದೆ. ಬೆಳಗ್ಗೆ 5.45ಕ್ಕೆ ಕೆಎಸ್ಎಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ಈ ರೈಲು, 5.55ಕ್ಕೆ ಯಶವಂತಪುರ, 915 ಕ್ಕೆ ದಾವಣಗೆರೆ, 11.30ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ, ಮಧ್ಯಾಹ್ನ 12.10ಕ್ಕೆ ಧಾರವಾಡ ತಲುಪುವುದು. ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1.15 ಕ್ಕೆ ಹೊರಟು, 1.35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ, 3.38ಕ್ಕೆ ದಾವಣಗೆರೆ, ರಾತ್ರಿ 7.13ಕ್ಕೆ ಯಶವಂತಪುರ ಹಾಗೂ 7.45ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ. ಕೆಎಸ್ಎಆರ್ ಬೆಂಗಳೂರು ಮತ್ತು ಧಾರವಾಡ ಮಧ್ಯೆ ಸಂಚರಿಸುವ ಈ ವಂದೇ ಭಾರತ್ ರೈಲು ಸದ್ಯ 8 ಬೋಗಿಗಳೊಂದಿಗೆ ಸಂಚರಿಸಲಿದೆ. ಪ್ರಯಾಣಿಕರ ಸ್ಪಂದನೆ ಗಮನಿಸಿ, ಬೋಗಿಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
![](https://karnataka1news.com/wp-content/uploads/2023/06/IMG_20230624_124547.jpg)