ವಿಜಯಪುರ: ಬೈಕ್ ಸ್ಕಿಡ್ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲ್ಲೂಕಿನ ತೊನಶ್ಯಾಳ ಬ್ರಿಡ್ಜ್ ಬಳಿ ನಡೆದಿದೆ. ನೇಪಾಳ ದೇಶದ ಹಾಗೂ ಹಾಲಿ ವಸ್ತಿ ಮನಗೂಳಿಯ ಸಾಯಿ ಗ್ರ್ಯಾಂಡ್ ಹೋಟೆಲ್ನ ಮನೀಷ್ ರುದ್ರಬಹ್ದೂರ ಮೃತಪಟ್ಟಿರುವ ದುರ್ದೈವಿ. ಇನ್ನು ಹೆಂಡತಿಯನ್ನು ಕರೆದುಕೊಂಡು ಬರಲು ಹೋಗುತ್ತಿದ್ದಾಗ ಬೈಕ್ ಸ್ಕಿಡ್ಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.