ವಿಜಯಪುರ: ಅಕ್ರಮ ಅಂಗಡಿಗಳು ಹಾಗೂ ಮನೆಯ ಗೋಡೆಗಳ ತೆರವು ಕಾರ್ಯಾಚರಣೆ ವಿಜಯಪುರ ನಗರದ ರೈಲ್ವೆ ನಿಲ್ದಾಣದ ಎದುರು ನಡೆಯಿತು. ರಸ್ತೆ ಅಭಿವೃದ್ಧಿ ಹಿನ್ನೆಲೆ ಅಂಗಡಿಗಳು ಹಾಗೂ ಮನೆಯ ಗೋಡೆಗಳ ತೆರವು ಮಾಡಲಾಯಿತು. ಇನ್ನೂ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಈ ವೇಳೆ ಅಹಿತಕರ ಘಟನೆಗಳು ಆಗದಂತೆ ಗೋಳಗುಮ್ಮಟ್ ಪೊಲೀಸ ಠಾಣಾ ವತಿಯಿಂದ ಬಂದೋಬಸ್ತ್ ಕೈಗೊಳ್ಳಲಾಗಿತ್ತು.