ಮಂಡ್ಯ: ತರಗತಿ(ಕ್ಲಾಸ್) ಬರುತ್ತಿಲ್ಲವೆಂದು ಉಪನ್ಯಾಸಕರು ಪಾಲಕರಿಗೆ ಹೇಳಿದಕ್ಕೆ ವಿದ್ಯಾರ್ಥಿ ಲಾಂಗ್ ಹಿಡಿದು ಉಪನ್ಯಾಸರಿಗೆ ಬೆದರಿಕೆ ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಅವರೇಗೆರೆ ಗ್ರಾಮದ ಉದಯ್ ಗೌಡ (18) ಎನ್ನುವ ವಿದ್ಯಾರ್ಥಿ ಉಪನ್ಯಾಸಕರಿಗೆ ಲಾಂಗ್ ತೋರಿಸಿದ್ದಾನೆ. ಈ ಹಿನ್ನೆಲೆ ಉಪನ್ಯಾಸಕ ಚಂದನ್ ರಿಂದ ದೂರು ನೀಡಿದ್ದಾರೆ. ಲಾಂಗ್ ಹಿಡುದು ಬಂದ ಘಟನೆ ವಿಡಿಯೋವನ್ನ ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ಧಾರೆ. ಸದ್ಯ ಉಪನ್ಯಾಸಕ ಚಂದನ್ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂತರ ಉದಯ್ ಗೌಡ ಪೋಷಕರೊಂದಿಗೆ ಬಂದು ಕ್ಷಮೆಯಾಚಿಸಿದ್ದಾನೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.