ವಿಜಯಪುರ: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ನಗದು, ಚಿನ್ನ ದೋಚಿಕೊಂಡು ಎಸ್ಕೇಪ್ ಆಗಿರುವ ಘಟನೆ ವಿಜಯಪುರದ ಇಂದ್ರಾ ನಗರದಲ್ಲಿ ನಡೆದಿದೆ. ಮಾರುಕಟ್ಟೆಗೆ ಹೋಗಿದ್ದ ವೇಳೆ ಕದೀಮರು ಮನೆಯ ಒಡೆದು ಮನೆಯಲ್ಲಿದ್ದ 90 ಗ್ರಾಂ ಚಿನ್ನ, 130 ಗ್ರಾಂ ಬೆಳ್ಳಿ, 50 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ. ಶಿವಾನಂದ ಸಿಂಗೆ ಎಂಬುವವರ ಮನೆಯಲ್ಲಿ ಕಳ್ಳತನ ಆಗಿದೆ. ಸ್ಥಳಕ್ಕೆ ಗೋಳಗುಮ್ಮಟ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/10/IMG_20231025_150553-1024x582.jpg)