ಬೆಳಗಾವಿ; ಎಸ್ಬಿಐ ಎಟಿಎಂ ಕೊರೆದು ಲಕ್ಷಾಂತರ ಹಣ ದೋಚಿಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಅಂಬೇಡ್ಕರ್ ನಗರ ಬಳಿ ನಡೆದಿದೆ. ಎಸ್ಬಿಐ ಎಟಿಂನಲ್ಲಿದ್ದ ಅಂದಾಜು 20 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ. ಕಾರಿನಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ. ಕಟರ್ನಿಂದ ಎಟಿಎಂ ಕಟ್ ಮಾಡಿ ಹಣದೊಂದಿಗೆ ಎಸ್ಕೇಪ್ ಆಗಿದ್ದು, ಎಟಿಎಂನಲ್ಲಿ ಎಷ್ಟು ಹಣ ಇತ್ತು ಎಂಬ ಬಗ್ಗೆ ಬ್ಯಾಂಕ್ ಸಿಬ್ಬಂದಿ, ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ, ಮತ್ತೊಂದೆಡೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೂ ವಿಫಲ ಯತ್ನ ಆಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು, ಎಫ್ಎಸ್ಎಲ್ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
![](https://karnataka1news.com/wp-content/uploads/2023/11/IMG-20231109-WA0106-1024x576.jpg)