ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ ಹತ್ಯೆ ಪ್ರಕರಣವನ್ನು ಖಂಡನೀಯ ಎಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡೀತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಅಭಿಪ್ರಾಯ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಅಭಿಪ್ರಾಯದ ಮೂಲಕವೇ ವಿರೋಧಿಸಬೇಕು. ಹತ್ಯೆ ಮೂಲಕ ಅಲ್ಲ. ಇಂಥ ಘಟನೆ ಮಾಡಿದವರು, ಪ್ರಚೋದನೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಮುಂದಿನ ದಿನಗಳಲ್ಲಿ ಇಂಥ ಘಟನೆ ಮರುಕಳಿಸಬಾರದು ಎಂದರು.
ಅಲ್ಲದೇ, ಸರ್ಕಾರದ ಸೌಲಭ್ಯ ಎಲ್ಲ ಸಮುದಾಯದವರಿಗೆ ಸಿಗಬೇಕು. ಯಾವ ಸಮುದಾಯದ ಬೇಡಿಕೆ ನ್ಯಾಯೋಚಿತವಾಗಿದೆಯೋ ಆ ಎಲ್ಲ ಸಮುದಾಯಗಳ ಬೇಡಿಕೆಯನ್ನು ಸರ್ಕಾರ ನೀಡಬೇಕು. ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಸೌಲಭ್ಯಗಳು ಎಲ್ಲರಿಗೂ ಸಮಾನವಾಗಿ ಸಿಗಬೇಕು. ಆಕಾರಣಕ್ಕೆ ಯಾರೆಲ್ಲ ಸೌಲಭ್ಯ ವಂಚಿತರಾಗಿದ್ದಾರೋ ಅವರಿಗೆಲ್ಲ ಮೀಸಲಾತಿ ಅವಕಾಶ ಕಲ್ಪಿಸಬೇಕೆಂದರು.