ವಿಜಯಪುರ: ಬೀದಿನಾಯಿಗಳ ಹಾವಳಿಯಿಂದ ಮತ್ತೇ ಮೂವರು ಅಪ್ರಾಪ್ತ ಮಕ್ಕಳ ಮೇಲೆ ಬೀದಿನಾಯಿಗಳು ಅಟ್ಯಾಕ್ ಮಾಡಿರುವ ಘಟನೆ ವಿಜಯಪುರ ಬಾಗಾಯತ್ ಗಲ್ಲಿಯಲ್ಲಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ವೈದ್ಯರು ಚಿಕಿತ್ಸೆ ನೀಡಿ ರೇಬೀಸ್ ಲಸಿಕೆ ಹಾಕಿದ್ದಾರೆ. ಅಲ್ಲದೇ, ನಿನ್ನೆ ಕೂಡ ಮೂವರು ಅಪ್ರಾಪ್ತ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ವು. ಎಲ್ಲರಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.