ವಿಜಯಪುರ: ಆಕಸ್ಮಿಕ ಬೆಂಕಿ ಅವಗಡದಿಂದ 20 ಎಕರೆಗೂ ಅಧಿಕ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದಲ್ಲಿ ನಡೆದಿದೆ. ಪ್ರಸನ್ನ ನೀಲೂರೆ, ವೀರೇಶ ಕೋರೆ, ದಯಾನಂದ ಕೋರೆ, ಜಗನ್ನಾಥ ರೇವತಗಾಂವ ಎನ್ನುವವರಿಗೆ ಸೇರಿದ ಕಬ್ಬು ಹಾನಿಯಾಗಿದೆ. ಕಟಾವಿಗೆ ಸಿದ್ಧವಾಗಿದ್ದ ಸುಮಾರು ೨೦ ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕೂಡಲೇ ಹತ್ತಿರದಲ್ಲಿದ್ದ ಕಬ್ಬು ಕಟಾವಿನ ಗ್ಯಾಂಗ್ ಕರೆಸಿ ಕಟಾವು ಮಾಡಿ ಹತ್ತಿರದ ಸಕ್ಕರೆ ಕಾರ್ಖಾನೆಗೆ ಸಾಗಿಸಲು ಸಿದ್ಧತೆ ಮಾಡಲಾಗಿದೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/11/IMG_20231128_173004-1024x576.jpg)