ವಿಜಯಪುರ: ಬೃಹತ್ ಗೋದಾಮಿನಲ್ಲಿ ಚೀಲಗಳು ಪಲ್ಟಿಯಾಗಿರುವ ಪರಿಣಾಮ ಅಡಿಯಲ್ಲಿ ಮೂವರ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದಿದೆ. ನಗರದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಗೋದಾಮಿನಲ್ಲಿ ನೂರಾರು ಚೀಲಗಳ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಲಬುರಗಿಯ
SDRF ತಂಡದಿಂದ ಮೃತದೇಹ ಶೋಧ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. 26 ಜನರ ತಂಡದಿಂದ ಸಂಸ್ಕರಣಾ ಯುನಿಟ್ ಕೆಳಗೆ ಸಿಕ್ಕಿರುವ ಕಾರ್ಮಿಕರ ಮೃತ ದೇಹಗಳು ಹುಡುಕಾಟ ಮಾಡುತ್ತಿದ್ದಾರೆ. ಕಬ್ಬಿಣ ಕಟ್ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ್ ರಾಜೇಶ್ ಮುಖಿಯಾ(25), ರಾಮಬ್ರೀಜ್ ಮುಖಿಯಿ (29), ಶಂಭು ಮುಖಿಯಾ (26) ಶವ ಪತ್ತೆ ಸಿಕ್ಕಿದೆ. ಕಾರ್ಯಾಚರಣೆ ಮುಂದುವರಿದಿದೆ. ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೃಹತ್ ದುರಂತ ಮೂವರ ಶವ ಪತ್ತೆ | ಕಾರ್ಯಾಚರಣೆ ಮುಂದುವರಿದಿದೆ
![](https://karnataka1news.com/wp-content/uploads/2023/12/IMG-20231204-WA0088-860x387.jpg)