ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ; ಬಿಜೆಪಿಗೆ ತೀವ್ರ ಮುಖಭಂಗ
ವಿಜಯಪುರ: ಮಹಾನಗರ ಪಾಲಿಕೆ ಆಡಳಿತ ಮತ್ತೆ ಕೈ ವಶವಾಗಿದ್ದು, ಬಿಜೆಪಿಯ ಮುಖಭಂಗ ಸಂಸ್ಕೃತಿ ಮುಂದುವರಿದಿದೆ. ಮಂಗಳವಾರ ವಿಜಯಪುರ ಮಹಾನಗರ ಪಾಲಿಕೆ ಯಲ್ಲಿ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್ ನ ಮಹೇಜ್ ಬಿನ್ ಅಬ್ದುಲ್ ರಜಾಕ್ ಹೊರ್ತಿ ಹಾಗೂ ಉಪಮೇಯರ್ ಆಗಿ ದಿನೇಶ ಹಳ್ಳಿ ಆಯ್ಕೆಯಾಗಿದ್ದಾರೆ. ಚುನಾವಣೆ ತಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಹೊರನಡೆದರೆ ಕಾಂಗ್ರೆಸ್ ಸದಸ್ಯರು ಗೆಲುವಿನ ಸಂಭ್ರಮದಲ್ಲಿ ತೇಲಾಡಿದರು.