![](https://karnataka1news.com/wp-content/uploads/2024/01/IMG-20240110-WA0049-1024x769.jpg)
ವಿಜಯಪುರ: ಬೈಕ್ ಹಾಗೂ ಬಸ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಬಸಾವಳಗಿ ಹಾಗೂ ಹಂಚಿನಾಳ ರಸ್ತೆಯಲ್ಲಿ ನಡೆದಿದೆ. ಬೈಕ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಬಳಿಕ ಬಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತದನಂತರ ಬಸ್ ಹೊತ್ತಿ ಉರಿದಿದೆ. ಅಲ್ಲದೇ, ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಆದ್ರೇ, ಬೈಕ್ ಸವಾರನ ಹೆಸರು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಬಸ್ನಲ್ಲಿದ್ದ ಪ್ರಯಾಣಿಕರು ಜಸ್ಟ್ ಪಾರಾಗಿದ್ದಾರೆ. ಹೊತ್ತಿ ಉರಿದ ಬಸ್ನ ಬೆಂಕಿಯನ್ನು ಅಗ್ನಿ ಶಾಮಕ ಸಿಬ್ಬಂದಿಗಳು ನಂದಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)