ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬಳಿ ರವಿವಾರ ನಡೆದಿದೆ. ತಂಪು ಪಾನೀಯ ಪ್ಲಾಸ್ಟಿಕ್ ಬಾಟಲಿಗಳನ್ನು ತೆಗೆದುಕೊಂಡು ಹೋಗುವಾಗ ಅವಘಡ ಸಂಭವಿಸಿದೆ. ಟ್ರಕ್ ನಡುವೆ ಸಿಲುಕಿದ ಚಾಲಕನ ರಕ್ಷಣೆ ಮಾಡಲಾಗಿದೆ. ರಕ್ಷಣೆ ನಂತರ ಗಾಯಾಳು ಚಾಲಕ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋವಾದಿಂದ ಹೈದ್ರಾಬಾದ್ ತೆರಳುತ್ತಿತ್ತು. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ