ವಿಜಯಪುರ: ಆಹಾರ ನಿರೀಕ್ಷಕ ಅಧಿಕಾರಿಗಳು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಅವಧಿ ಮೀರಿದ ಮತ್ತು ಅದರ ಉತ್ಪಾದನೆಯ ದಿನಾಂಕ ನಮೂದು ಇರುವ ಹಲವು ಆಹಾರ ಪದಾರ್ಥಗಳನ್ನು ಜಪ್ತಿ ಮಾಡಿದರು. ಆಹಾರ ಇಲಾಖೆಯ ಪರವಾಣಿಗೆ ಪಡೆಯದ ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಯಿತು. ಈ ವೇಳೆ ವಿವಿಧ ಅಂಗಡಿಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದರು.