ವಿಜಯಪುರ: ನವಜಾತ ಶಿಶು ಮನೆಯ ಬಳಿ ಎಸೆದು ದುರುಳರು ಪರಾರಿಯಾಗಿರುವ ಘಟನೆ ವಿಜಯಪುರದ ಚಾಲುಕ್ಯನಗರ ವೆಸ್ಟ್ ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ.ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ಮಗು ಎಸೆದು ಎಸ್ಕೇಪ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗು ಎಸೆದಿದ್ದಾರೆ. ಅಲ್ಲದೇ, ನವಜಾತ ಗಂಡು ಶಿಶು
ಮೃತಪಟ್ಟಿದೆ. ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಪತ್ತೆಯಾಗಿದೆ. ಮನೆಯಲ್ಲಿ ಬಾಡಿಗೆ ಇರುವ ವಿದ್ಯಾರ್ಥಿನಿಯರು ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ನವಜಾತು ಶಿಶು ಮನೆಯ ಎದುರು ಎಸೆದ ದುಷ್ಟರು
![](https://karnataka1news.com/wp-content/uploads/2024/06/IMG_20240622_080755-860x482.jpg)