ಬೆಂಗಳೂರು :
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೆಳುವಂತೆ ನಿಗಮದ ಹಿಂದಿನ ಎಂ.ಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಆಧಿಕಾರಿಗಳ ವರ್ತನೆ ವಿರೋಧಿಸಿ ಸಚಿವ ಸಂಪುಟ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು, ಇಂದು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರ ಸಾರಥ್ಯದಲ್ಲಿ ಬೆಂಗಳೂರಿನ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಧರಣಿ ನಡೆಸಿದರು.
ಈ ವೇಳೆ ಮಾತನಾಡಿದ ಕಾಂಗ್ರೇಸ್ ಮುಂಖಡರು ಕೇಂದ್ರ ಸರ್ಕಾರ ಈ ತನಿಖಾ ಸಂಸ್ಥೆಗಳನ್ನು ತನ್ನ ಅಧಿನದಲ್ಲಿ ಇಟ್ಟುಕೊಂಡು ಕಾಂಗ್ರೇಸ್ ನಾಯಕರ ವಿರುದ್ದ ಕುಂತಂತ್ರ ನಡೆಸುತ್ತಿದ್ದಾರೆ, ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಈ ಸಂಸ್ಥೆಗಳು ಯಾವುದೆ ದಾಳಿ ಮಾಡುವದಿಲ್ಲ ಆದರೆ ಕಾಂಗ್ರೇಸ್ ನೇತೃತ್ವದ ಸರ್ಕಾರ ಇರುವ ರಾಜ್ಯಗಳೆ ಟಾರ್ಗೇಟ್ ಮಾಡುತ್ತಿದ್ದಾರೆ, ತನಿಖೆ ಕಾನೂನು ಪ್ರಕಾರ ಸ್ವತಂತ್ರವಾಗಿ ನಡೆಸಬೇಕು ಆದರೆ ಇಲ್ಲಿ ಒತ್ತಡ ಹಾಕಿ ತನಿಖೆ ನಡೆಸುತ್ತಿದ್ದಾರೆ, ಬಿಜೆಪಿ ಏಜೇಂಟ್ ರನಂತೆ ತನಿಖೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.