ವಿಜಯಪುರ: ಚಲಿಸುತ್ತಿದ್ದ ಬಸ್ ಪಾಟಾ ಕಟ್ ಆಗಿರುವ ಪರಿಣಾಮ ಬಸ್ ಜಮೀನಿಗೆ ನುಗ್ಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ರಸ್ತೆಯಲ್ಲಿ ನಡೆದಿದೆ.
ಬಸ್ನಲ್ಲಿದ್ದ 15 ಪ್ರಯಾಣಿಕರು ಜಸ್ಟ್ ಪಾರಾಗಿದ್ದಾರೆ. ಅಲ್ಲದೇ, ಬಸ್ ಚಾಲಕ ರಾಯಗೊಂಡ ಬಿರಾದಾರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ಯಾರಿಗೂ ಹಾನಿಯಾಗಿಲ್ಲ. ಆದ್ರೇ, ಬಸ್ ನಿರ್ವಾಹಕ ದಸ್ತಗಿರಿಸಾಬ್ ವಾಲೀಕಾರ್ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಚಾಲಕನ ಕಾರ್ಯಕ್ಕೆ ಪ್ರಯಾಣಿಕರು, ಸ್ಥಳೀಯರು ಧನ್ಯವಾದ ಹೇಳಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.