ವಿಜಯಪುರ: ದುಷ್ಕರ್ಮಿಗಳು ಮನೆಗೆ ನುಗ್ಗಿ ಗೃಹಿಣಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಲಗುಣಕಿ ಗ್ರಾಮದಲ್ಲಿ ನಡೆದಿದೆ.
21 ವರ್ಷದ ಪಲ್ಲವಿ ವಠಾರ್ ಹತ್ಯೆಯಾಗಿರುವ ದುರ್ದೈವಿ. ಇನ್ನು ದುಷ್ಕರ್ಮಿಗಳು ಮನೆಗೆ ಏಕಾಏಕಿ ನುಗ್ಗಿ ಆಯುಧದಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ಇನ್ನು ಕೊಲೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.