ವಿಜಯಪುರ: ವಿಜಯಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.
ಜಗ್ಗು ಲಕಡಿ, ಸಂತೋಷ ಬಿರಾದಾರ, ಈಶ್ವರ ಸಿಂಧೆ ಮೃತಪಟ್ಟಿರುವ ದುರ್ದೈವಿ, ಒಂದೇ ಬೈಕ್ನಲ್ಲಿ ಊಟ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದ ವೇಳೆಯಲ್ಲಿ ಸಾರವಾಡ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಬಳಿಕ ಅಪರಿಚಿತ ವಾಹನ ಸವಾರ ವಾಹನದ ಸಮೇತ ಪರಾರಿಯಾಗಿದ್ದಾನೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.