ವಿಜಯಪುರ: ಬಿಜೆಪಿ ಟಿಕೆಟ್ ಗಾಗಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.
ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಸಮ್ಮುಖದಲ್ಲಿಯೇ ಆಕಾಂಕ್ಷಿಗಳ ಬೆಂಬಲಿಗರು ಪರಸ್ಪರ ಮಾತಿನ ಚಕಮಕಿ ನಡೆಸಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹಾಗೂ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇನ್ನು ಕೆಲಕಾಲ ಗೊಂದಲ ಉಂಟಾಯಿತಲ್ಲದೇ ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತು.
ಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ನೀಡಬೇಕು ಎಂದು ಬೆಳ್ಳುಬ್ಬಿ ಎಂದಿದ್ದರಿಂದ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರು ಗಲಾಟೆ ಆರಂಭಿಸಿದರು.
ಮಧ್ಯ ಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ಗಲಾಟೆ ಮಾಡಿಸುವುದು ಸರಿಯಲ್ಲ ಎಂದಿದ್ದರಿಂದ ಕಾರ್ಯಕರ್ತರು ಸುಮ್ಮನಾದರು.