ವಿಜಯಪುರ: ನಗರಾದ್ಯಂತ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಿಡಾಡಿ ದನಗಳ ರಕ್ಷಣೆ ಮಾಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಪತ್ರಿಕಾ ಪ್ರಕಟಣೆಯಲ್ಲಿ ಮಂಗಳವಾರ ಮಾಹಿತಿ ತಿಳಿಸಿದ್ದಾರೆ.
ಇನ್ನು ನಗರಾದ್ಯಂತ 41 ಬಿಡಾಡಿ ದನಗಳನ್ನು ರಕ್ಷಣೆ ಮಾಡಿ ನಗರದ ಕಗ್ಗೋಡ ಗೋ ರಕ್ಷಣಾ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಇನ್ನು ನಗರ ವಲಯ 1ರಲ್ಲಿ 15, ವಲಯ 2ರಲ್ಲಿ 7 ಹಾಗೂ 3ರಲ್ಲಿ 19 ಗೋ ರಕ್ಷಣೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ. ಅದಕ್ಕಾಗಿ ಬಿಡಾಡಿ ದನಗಳನ್ನು ರಸ್ತೆಗೆ ಬಿಡದಂತೆ ಮಾಲೀಕರಿಗೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.