ವಿಜಯಪುರ: ಅನೈತಿಕ ಸಂಬಂಧ ಹಿನ್ನಲೆ ವ್ಯಕ್ತಿಯ ಹತ್ಯೆಗೈದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು.
ವಿಜಯಪುರದಲ್ಲಿ ರವಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 62 ವರ್ಷದ ತುಕಾರಾಂ ಚವ್ಹಾಣನ್ನು ಬರ್ಬರವಾಗಿ ತಂದೆ, ಮಕ್ಕಳು ಹತ್ಯೆಗೈದಿದ್ದರು.
ಇನ್ನು ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ಸೇರಿದಂತೆ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ತನಿಖೆ ಮಾಡಲಾಗುತ್ತಿದೆ. ಅಲ್ಲದೇ, ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.