ವಿಜಯಪುರ: ಮನೆಯ ಮಾಲೀಕ ದೆಹಲಿಗೆ ಹೋದಾಗ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ಚಾಲುಕ್ಯ ನಗರದಲ್ಲಿ ನಡೆದಿದೆ.
ಮಹಾದೇವ ಜಾಧವ್ ಎಂಬುವರ ಮನೆಯಲ್ಲಿ ಕಳ್ಳತನ ಆಗಿದೆ. ಇನ್ನೂ ಮನೆಯ ಇಂಟರ್ ಲಾಕ್ ಕಟ್ ಮಾಡಿ ಮನೆಯಲ್ಲಿದ್ದ 6.28 ಲಕ್ಷ ಮೌಲ್ಯದ 206 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅದಕ್ಕಾಗಿ ಕಳ್ಳರನ್ನು ಪತ್ತೆ ಮಾಡುವಂತೆ ದೂರು ದಾಖಲು ಮಾಡಿದ್ದಾರೆ. ಈ ಕುರಿತು ಆದರ್ಶನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.