ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿ, ಬಳಿಕ ಕಾರು ತಡೆಗೋಡೆ ಹಿನ್ನೆಲೆ ಓರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಯಾದಗಿರಿ ಜಿಲ್ಲೆಯ ಹುಣಸಗಿ ಗ್ರಾಮದ ಚನ್ನೂರ ಗ್ರಾಮದ ಬಿ.ಎಸ್.ಪಾಟೀಲ್ (59) ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ಇನ್ನು ಮೂವರು ಸೇರಿದಂತೆ ಬೈಕ್ ಸವಾರನೂ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.