ವಿಜಯಪುರ: ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರು ಕ್ರಾಸ್ ಬಳಿ ನಡೆದಿದೆ.
ಹಣಮಂತ ಸತ್ಯಪ್ಪ ಮೀನಗಾರ್ (50) ಸ್ಥಳದಲ್ಲೆ ಸಾವನ್ನಪ್ಪಿದ್ದು, ರವಿಚಂದ್ರಗೆ (17) ಗಂಭೀರ ಗಾಯಗೊಂಡಿದ್ದಾನೆ. ಮೂಲತಃ ಯಾದಗಿರಿಯ ಗಿರಿನಗರದ ನಿವಾಸಿಗಳಾಗಿದ್ದಾರೆ. ಗಾಯಗೊಂಡಿರುವನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.