ವಿಜಯಪುರ: ಕಾರ್ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿಯಾಗಿರುವ ಪರಿಣಾಮ ಕಾರಿನಲ್ಲಿದ್ದ ಓರ್ವ ಅಸುನೀಗಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಚಿಕ್ಕಸಿಂದಗಿ ಬೈಪಾಸ್ ಬಳಿ ನಡೆದಿದೆ.
ವೇಗವಾಗಿ ಸಂಚರಿಸುತ್ತಿದ್ದ ಕಾರ್ ರಸ್ತೆ ಬಿಟ್ಟು ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿರುವ ಬಗ್ಗೆ ಹೆಸರು, ವಿಳಾಸ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.