ವಿಜಯಪುರ: ಗ್ಯಾರೇಜ್ನಲ್ಲಿ ನಿಲ್ಲಿಸಿದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಗ್ಯಾರೇಜ್ ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ನಗರದ ಶಿಕಾರಖಾನೆ ರಸ್ತೆಯಲ್ಲಿ ನಡೆದಿದೆ. ನೂರ್ಅಹ್ಮದ ಎಂಬುವರ ಗ್ಯಾರೇಜ್ ಹಾನಿ ಆಗಿದೆ. ಗ್ಯಾರೇಜ್ನಲ್ಲಿದ್ದ ವಿವಿಧ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/10/IMG-20231028-WA0061-1024x768.jpg)