ವಿಜಯಪುರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಾನಿಕ್ ಅಂಗಡಿ ಸಂಪೂರ್ಣ ಭಸ್ಮವಾಗಿ, ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್ ಹತ್ತಿರ ನಡೆದಿದೆ.
ವಿಜಯ ಹಂಚಿನಾಳ ಮಾಲೀಕತ್ವದ ಎಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲವಾಗಿದೆ. ಇನ್ನು ಬೆಂಕಿ ಅವಘಡ ಸುಮಾರು 40 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಭಸ್ಮವಾಗಿದ್ದು, ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.