ವಿಜಯಪುರ: ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಯೋಜನೆಗಳ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಕ್ಟೋಬರ್.30 ರಂದು ಕಲಬುರಗಿಯಲ್ಲಿ ಬೃಹತ್ ಜನಜಾಗೃತಿ ಹಾಗೂ ವಿರಾಟ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದರು.
ವಿಜಯಪುರದಲ್ಲಿ ಶನಿವಾರ ಮಾತನಾಡಿದ ಅವರು,
ಸುಮಾರು 200 ಎಕರೆ ವಿಸ್ತಾರವಾದ ಜಮೀನಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಿಂದುಳಿದ ವರ್ಗದ 205 ಸಮುದಾಯದ ಜನ ಭಾಗವಹಿಸಲಿದ್ದಾರೆ. ಮಧ್ಯಪ್ರದೇಶದ
ಸಿಎಂ ಶಿವರಾಜಸಿಂಗ್ ಚವ್ಹಾಣ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯದ
ಎಲ್ಲ ಸಚಿವರು ಹಾಗೂ ಹಿಂದುಳಿದ ವರ್ಗದ ನಾಯಕರು ಪಾಲ್ಗೊಳ್ಳಲಿದ್ದಾರೆ. ವಿಜಯಪುರ ದಿಂದ ಐವತ್ತು ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರುವ ಭಾಗಿಯಾಗುತ್ತಿರುವುದು ವಿಶೇಷ ಆಗಿದೆ ಎಂದರು.