ಬಾಗಲಕೋಟ: ಜೀಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟ ಜಿಲ್ಲೆಯ ಇಳಕಲ್ ಪಟ್ಟಣದ ಎನ್ಎಚ್ 50ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಜೀಪ್ನಲ್ಲಿದ್ದ 4 ಜನಕ್ಕೆ ಗಂಭೀರ ಗಾಯಗಳಾಗಿದ್ದು, ಅದರಲ್ಲಿ ಇಲಕಲ್ಲ ಸಮೀಪದ ಹೇರೂರು ಗ್ರಾಮದ ಶಿವು ಅಳವಂಡಿ (30) ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನು ಜೀಪನಲ್ಲಿದ್ದ ಸಂಗಮೇಶ ಗೋನಾಳ ( 27), ನಾಗರಾಜ (36) ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾಂತೇಶ ಚಲವಾದಿ (28) ಬಾಗಲಕೋಟ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಳಕಲ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.