ಧಾರವಾಡ: ಬೇಡ್ತಿ ನಾಲಾ ಪೈಪ್ಲೈನ್ ಕಾಮಗಾರಿ ಮಾಡಲಾಗಿದ್ದು ಸ್ಥಳದಲ್ಲಿ ರಸ್ತೆ ಕುಸಿದು ಲಾರಿ ಸಿಲುಕಿಕೊಂಡ ಘಟನೆ ತಾಲ್ಲೂಕಿನ ಮಲಕನಕೊಪ್ಪ ಗ್ರಾಮದ ಹತ್ತಿರದ ರಾಜ್ಯ ಹೆದ್ದಾರಿ ನಡು ರಸ್ತೆಯಲ್ಲಿ ನಡೆದಿದೆ. ಲಾರಿಯೊಂದು ಕಟ್ಟಿಗೆ ತುಂಬಿಕೊಂಡು ತಡಸ ಕಡೆಯಿಂದ ಹಳಿಯಾಳಕ್ಕೆ ಹೋಗುವಾಗ ಕಲಘಟಗಿ ತಡಸ ರಸ್ತೆ ಮಾರ್ಗ ಮಧ್ಯೆ ಕುಸಿದು ಅಲ್ಲೇ ಸಿಲುಕಿಕೊಂಡಿದೆ. ಲಾರಿ ಟೈಯರ್ಗಳು ಕುಸಿದು ಪಲ್ಟಿಯಾಗುವ ಸಂಭವ ಕೂಡ ಇದ್ದು, ಈ ರಸ್ತೆಯಲ್ಲಿ ಸಣ್ಣ ಪುಟ್ಟ ವಾಹನ ಬಿಟ್ಟರೆ ಬಸ್ ಹಾಗೂ ಲಾರಿಗಳ ಸಂಚಾರ ಸ್ಥಗಿತಗೊಂಡಿವೆ.ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಪೈಪ್ ಲೈನ್ ಕಾಮಗಾರಿ ಮಾಡಿದ ಸ್ಥಳದಲ್ಲಿ ರಸ್ತೆ ದುರಸ್ತಿ ಮಾಡಬೇಕೆಂಬುದು ವಾಹನ ಸವಾರರು ಹಾಗೂ ಗ್ರಾಮಸ್ಥರ ಒತ್ತಾಯವಾಗಿದೆ.