ವಿಜಯಪುರ; ಮಾನಸಿಕವಾಗಿ ಮನನೊಂದುಕೊಂಡು ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. 43 ವರ್ಷದ ಅಡಿವೆಪ್ಪ ಘಾಯಿ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿದ್ದಾನೆ. ಆ ಹಣದಲ್ಲಿ ದಿನನಿತ್ಯ ಮದ್ಯ ಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದುಕೊಂಡಿದ್ದಾನೆ. ಅದಕ್ಕಾಗಿ ಜಿಗುಪ್ಸೆಗೊಂಡು ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.