ವಿಜಯಪುರ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಮೂವರು ದುಷ್ಕರ್ಮಿಗಳು ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಕ್ಕಿ ಕಾಲೋನಿಯಲ್ಲಿ ನಡೆದಿದೆ.
ಮನೆಯಲ್ಲಿದ್ದ ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ, ಮನೆ ದರೋಡೆಗೈದು ಪರಾರಿಯಾಗಿದ್ದಾರೆ. ನಿರ್ಮಲಾ ಸಪ್ಪಡ್ಲಿ ಎಂಬ ಒಂಟಿ ಮಹಿಳೆಯ ಮೇಲೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು, ಮನೆಯಲ್ಲಿದ್ದ 40ಗ್ರಾಂ ಚಿನ್ನಾಭರಣ, 25ಸಾವಿರ ನಗದು ಸೇರಿದಂತೆ ಇತರೇ ವಸ್ತುಗಳ ಕಳ್ಳತನ ಮಾಡಿದ್ದಾರೆ. ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.