ವಿಜಯಪುರ: ಬೈಕ್ ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನವಾಗೇವಾಡಿ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ಶನಿವಾರ ನಡೆದಿದೆ. ರಾಜಕುಮಾರ ಕಾಳೆ ಮೃತಪಟ್ಟಿರುವ ದುರ್ದೈವಿ. ಇನ್ನು ಬೈಕ್ನಲ್ಲಿ ಹೆಂಡತಿ ಮನೆಗೆ ಜೋಳ ತೆಗೆದುಕೊಂಡು ಹೋಗುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಸ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.