ಧಾರವಾಡ: ಹುಬ್ಬಳ್ಳಿ ಧಾರವಾಡ ಬೈಪಾಸ್ನಲ್ಲಿನ ರೇವಡಿಹಾಳ ಹತ್ತಿರ ಖಾಸಗಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟು, 26 ಜನ ಗಾಯಗೊಂಡ ಘಟನೆ ನಡೆದಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್, ಬೆಂಗಳೂರಿನಿಂದ ಪುನಾ ಕಡೆ ಹೊರಟಿದ್ದ ಲಾರಿಯ ನಡುವೆ ಅಪಘಾತವಾಗಿದೆ. ಬಸ್ ಚಾಲಕ ಟ್ರ್ಯಾಕ್ಟರ್ ಓವರಟೇಕ್ ಮಾಡಲು ಹೋದಾಗ ಈ ದುರ್ಘಟನೆ ಆಗಿದೆ. ಅಲ್ಲದೇ, ಮೃತಪಟ್ಟಿರುವ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.